ಪೋಸ್ಟ್‌ಗಳು

Top News

7:20 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಇಮೇಜ್
ಬಾಗಲಕೋಟೆ, ಜೂನ್ 25: ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (2025–26) ಅಡಿಯಲ್ಲಿ ₹7.20 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಗಳಿಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಯೋಜನೆಯಡಿ ಕಿರಸೂರ–ಮುಗಳೊಳ್ಳಿ ರಸ್ತೆ, ಮುಚಖಂಡಿ ಕ್ರಾಸ್‌ನಿಂದ ಬಸವೇಶ್ವರ ಸರ್ಕಲ್‌ವರೆಗೆ ರಸ್ತೆ, ಸಿಕ್ಕೇರಿ ಕೆ.ಎಚ್.ಬಿ. ಬಡಾವಣೆಯ ಆಂತರಿಕ ರಸ್ತೆಗಳು, ಕಮಗತಿ ಗ್ರಾಮದ ವಿಠೋಬಾ ದೇವಾಲಯದಿಂದ ರಾಜ್ಯ ಹೆದ್ದಾರಿ-44ಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ಶಿರೂರ ಸಮೀಪದ ಹೇಮರೆಡ್ಡಿ ಮಲ್ಲಮ್ಮ ದೇವಾಲಯದಿಂದ ರಾಜ್ಯ ಹೆದ್ದಾರಿ-367ಕ್ಕೆ ಸಂಪರ್ಕಿಸುವ ರಸ್ತೆ ಸೇರಿದಂತೆ ಒಟ್ಟು ₹7.20 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ಗುಣಮಟ್ಟದ ರಸ್ತೆ ನಿರ್ಮಾಣ ಅತ್ಯಗತ್ಯವಾಗಿದೆ. ಉತ್ತಮ ರಸ್ತೆ ಸಂಪರ್ಕವು ಪ್ರದೇಶದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದ್ದು, ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದರು. ಜೊತೆಗೆ ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಬಾಗಲ...

ಸಹಕಾರ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ನೆರವು: ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ, ಜೂ.24: ತಾಲೂಕು ಒಕ್ಕುಲತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆ ಇವರ ವತಿಯಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ತಮ್ಮ ತಂದೆ ದಿವಂಗತ ಎಚ್.ವೈ. ಮೇಟಿ ಅವರು ಈ ಸಂಘದ ಮೂಲಕವೇ ರಾಜಕೀಯ ಜೀವನಕ್ಕೆ ಪ್ರವೇಶಿಸಿ, ನಿರ್ದೇಶಕರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಸಂಘದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದರು. "ನಮ್ಮ ತಂದೆಯವರು ಈ ಸಹಕಾರಿ ಸಂಸ್ಥೆಯ ಬೆಳವಣಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿದ್ದರು. ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ನಾನು ಸಹ ಸರ್ಕಾರದ ಸಹಕಾರದೊಂದಿಗೆ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ನೆರವು ಹಾಗೂ ಸೇವೆ ನೀಡಲು ಬದ್ಧನಾಗಿದ್ದೇನೆ" ಎಂದು ಹೇಳಿದರು. ಅವರು ಮುಂದುವರೆದು, 2013ರಲ್ಲಿ ತಮ್ಮ ತಂದೆ ಎಚ್.ವೈ. ಮೇಟಿ ಅವರ ಅಧ್ಯಕ್ಷತೆಯಲ್ಲಿ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಇಂದು ಆ ಕಟ್ಟಡ ಸಂಘದ ಪ್ರಗತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿ ನಿಂತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವ್ಹಿ.ವೈ. ರಂಗಣ್ಣವರ, ಉಪಾಧ್ಯಕ್ಷ ಎಸ್.ಜಿ. ಹಿರೇಮಠ, ನಿರ್ದೇಶಕರಾದ ಮಂಜುನಾಥ ಬಿಲಕೇರಿ, ಮುತ್ತಪ್ಪ ಹುಗ್ಗಿ,...

ಸಾರಿಗೆ ಸಚಿವ ಬೈರತಿ ಸುರೇಶ್‌ಗೆ ಭೇಟಿ; ಬಾಗಲಕೋಟ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ

ಇಮೇಜ್
ಬೆಂಗಳೂರು: ಬಾಗಲಕೋಟ ಶಾಸಕ ಉಮೇಶ ಮೇಟಿ ಅವರು ಮಂಗಳವಾರ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ಬೈರತಿ ಸುರೇಶ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ, ಬಾಗಲಕೋಟ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕ್ಷೇತ್ರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಹೊಸ ಬಸ್ ಸೇವೆಗಳನ್ನು ಆರಂಭಿಸುವುದು ಹಾಗೂ ಜನಸಾಮಾನ್ಯರ ಅನುಕೂಲಕ್ಕೆ ಅಗತ್ಯವಿರುವ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಕುರಿತು ಸಚಿವರ ಗಮನ ಸೆಳೆಯಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಈ ವೇಳೆ ಸಚಿವರಿಗೆ ಸಲ್ಲಿಸಲಾಯಿತು. ಬೇಡಿಕೆಗಳಿಗೆ ಸಚಿವರು ಸ್ಪಂದಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ವಿವಿಧ ಪ್ರಸ್ತಾವನೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಿ, ಇಲಾಖೆಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಜನರ ಅನುಕೂಲಕ್ಕೆ ಅಗತ್ಯವಿರುವ ಯೋಜನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಹೊಳೆಬಸು ಶೆಟ್ಟರ್, ದ್ಯಾಮಣ್ಣ ಗಾಳ್ಳಿ, ಶಿದಲಿಂಗಪ್ಪ ಗುಳೇದ, ಅಕ್ಬರ್ ಮುಲ್ಲಾ, ಚಂದು ಕುರಿ, ಯಮನೂರ...

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಬೃಹತ್ ಪಾದಯಾತ್ರೆ

ಇಮೇಜ್
ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಬೃಹತ್ ಪಾದಯಾತ್ರೆ ನಡೆಸಿದರು. ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಬೆಂಬಲಿಗರು ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಪಾದಯಾತ್ರೆಯ ವೇಳೆ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಿ, ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ಕೆಲ ಕಾರ್ಯಕರ್ತರು ರಸ್ತೆ ಮೇಲೆ ಉರುಳಾಡಿ ದೀಡ ನಮಸ್ಕಾರ ಹಾಕುವ ಮೂಲಕ ತಮ್ಮ ಮನವಿಯನ್ನು ವ್ಯಕ್ತಪಡಿಸಿದರು. ವಿಜಯಾನಂದ ಕಾಶಪ್ಪನವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದು, ಪಕ್ಷದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಬೆಂಬಲಿಗರು ಹೇಳಿದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ವಿಜಯಾನಂದ ಕಾಶಪ್ಪನವರು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು. ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವುದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬೆಂಗಳೂರು, ಜೂನ್ 22: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಅವರು ಇಂದು ಬೆಂಗಳೂರಿನಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಖರ್ಗೆ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಶಾಸಕ ಉಮೇಶ್ ಮೇಟಿ ಅವರು, ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಖರ್ಗೆ ಅವರ ಅನುಭವ, ಸರಳತೆ ಹಾಗೂ ಜನಪರ ನಾಯಕತ್ವವು ಕಾಂಗ್ರೆಸ್ ಕಾರ್ಯಕರ್ತರಿಗೆ ಸದಾ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಖರ್ಗೆ ಅವರು ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆ ಹಾಗೂ ಸಾರ್ವಜನಿಕ ಜೀವನದಲ್ಲಿನ ಅವರ ಸೇವೆ ಅನನ್ಯವಾಗಿದೆ ಎಂದು ಶಾಸಕ ಉಮೇಶ್ ಮೇಟಿ ಪ್ರಶಂಸಿಸಿದರು. ಈ ಸಂದರ್ಭದಲ್ಲಿ ದ್ಯಾಮಣ್ಣ ಗಾಳ್ಳಿ, ಹೊಳೆಬಸು ಶೆಟ್ಟರ್, ಅಜಿಸಾಬ್ ದಂಡಿನ, ಭರತಕುಮಾರ ಹಿಟ್ಟಿ, ಜಟಿಪ್ಪ ಮಾದಾಪುರ, ಅಕ್ಬರ್ ಮುಲ್ಲಾ, ಮಲ್ಲು ಲಮಾಣಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ವಿಧಾನಸೌಧದಲ್ಲಿ ಮತದಾನ; ನೂತನ ಪದಾಧಿಕಾರಿಗಳಿಗೆ ಉಮೇಶ್ ಮೇಟಿ ಅಭಿನಂದನೆ

ಇಮೇಜ್
ವಿಧಾನಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಿದ ಶಾಸಕ ಉಮೇಶ್ ಎಚ್. ಮೇಟಿ; ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಬೆಂಗಳೂರು: ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಗುರುವಾರ ನಡೆದ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು ಮತ ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಸಂವಿಧಾನದ ಆಶಯಗಳು ಹಾಗೂ ಜನತಾಂತ್ರಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ತಿನ ಹುದ್ದೆಗಳಿಗೆ ಆಯ್ಕೆಯಾಗಿರುವ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಬಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ ಕಾರ್ತಿಕ್ ಅವರಿಗೆ ಶಾಸಕ ಉಮೇಶ್ ಮೇಟಿ ಅಭಿನಂದನೆ ಸಲ್ಲಿಸಿದರು.

ಬೆಳಗಾವಿಯಲ್ಲಿ ಮಾಜಿ ಸೈನಿಕನ ಸಾವಿನ ಪ್ರಕರಣಕ್ಕೆ ಹೊಸ ತಿರುವು

ಇಮೇಜ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಅವರ ಸಾವಿನ ಪ್ರಕರಣವು ಮಹತ್ವದ ತಿರುವು ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ, ಆಕೆಯ ಆಪ್ತ ಸ್ನೇಹಿತ ಹಾಗೂ ಕೆಲ ಅಧಿಕಾರಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಸಂದೀಪ್ ಅವರು ಅಪಘಾತದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದು, ಆರಂಭದಲ್ಲಿ ಇದನ್ನು ಸಹಜ ಸಾವು ಎಂದು ಪರಿಗಣಿಸಲಾಗಿತ್ತು. ಆದರೆ ಮೃತರ ಕುಟುಂಬಸ್ಥರಿಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಾಯಿತು. ತನಿಖೆ ವೇಳೆ ಸಂದೀಪ್ ಅವರ ಪತ್ನಿ ಸುಮಾ ಮಂಜರಗಿ ಹಾಗೂ ಪುಂಡಲೀಕ ಎಂಬ ವ್ಯಕ್ತಿಯ ನಡುವಿನ ಆಪ್ತ ಸಂಬಂಧದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಇದೇ ವೇಳೆ ಸಂದೀಪ್ ಅವರ ಸಾವಿನ ಹಿಂದೆ ಸಂಚು ರೂಪಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಆಸ್ಪತ್ರೆಯ ಕೆಲ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಕೆಲ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ವೇಳೆ ಸಂದೀಪ್ ಅವರ ಸಾವಿನ ಬಳಿಕ ವಿಮಾ ಕಂಪನಿಯಿಂದ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಮೊತ್ತದ...