ಪೋಸ್ಟ್‌ಗಳು

Top News

ತಮಿನಾಳ ನೆರೆ ಸಂತ್ರಸ್ತರ ನಿವೇಶನ ಹಂಚಿಕೆ: ಲೋಕಾಯುಕ್ತ ದಾಳಿ

ಇಮೇಜ್
ಬಾಗಲಕೋಟೆ: ಬದಾಮಿ ತಾಲೂಕಿನ ಗ್ರಾಮ ಪಂಚಾಯಿತಿ ಕಾತರಿಕಿ ಹದ್ದಿಯ ತಮಿನಾಳ ಗ್ರಾಮದಲ್ಲಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಬಾದಾಮಿ ತಹಶೀಲ್ದಾರ್‌ ಕಚೇರಿಗೆ ದಾಳಿ ನಡೆಸಿ ದಾಖಲೆಗಳ ಶೋಧ ಕಾರ್ಯ ಕೈಗೊಂಡಿದ್ದಾರೆ. 2009ರಲ್ಲಿ ಅತಿವೃಷ್ಟಿ ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ತಮಿನಾಳ ಗ್ರಾಮದ 121 ಕುಟುಂಬಗಳು ನೆರೆ ಹಾವಳಿಗೆ ತುತ್ತಾಗಿದ್ದವು. 2011ರಲ್ಲಿ ಸಂತ್ರಸ್ತರಿಗಾಗಿ ನಿವೇಶನ ಹಂಚಿಕೆ ಮಾಡುವ ವೇಳೆ ಹೆಚ್ಚುವರಿಯಾಗಿ 25 ಮನೆಗಳನ್ನು ನಿರ್ಮಿಸಲಾಗಿದ್ದರೂ, 38 ನೆರೆ ಸಂತ್ರಸ್ತ ಕುಟುಂಬಗಳನ್ನು ಕೈಬಿಟ್ಟು ಸಂತ್ರಸ್ತರಲ್ಲದ 62 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಇದರಿಂದ ಅಂದಾಜು ₹1.05 ಕೋಟಿ ಅವ್ಯವಹಾರ ನಡೆದಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ಬಾದಾಮಿ ತಹಶೀಲ್ದಾರ್‌ ಕಚೇರಿಯಲ್ಲಿ ದಾಖಲೆಗಳ ಶೋಧನೆ ನಡೆಸಲು ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆಯಲಾಗಿದೆ. ಬಳಿಕ ಡಿವೈಎಸ್‌ಪಿ ಹಾಗೂ ಇಬ್ಬರು ಪೊಲೀಸ್‌ ನಿರೀಕ್ಷಕರನ್ನೊಳಗೊಂಡ ಲೋಕಾಯುಕ್ತ ತಂಡ ಕಚೇರಿಗೆ ತೆರಳಿ ಶೋಧ ಕಾರ...

ಉದಯ ಲೋಕ 20/08/26 ದಿನಪತ್ರಿಕೆ

ಇಮೇಜ್
ಪೇಜ್ 2 ಪೇಜ್ 3 ಪೇಜ್ 4

ಶಿರೂರು–ಕಮತಗಿ ಪಟ್ಟಣಗಳ ಅಭಿವೃದ್ಧಿಗೆ ₹7.58 ಕೋಟಿ: ಶಾಸಕ ಉಮೇಶ ಮೇಟಿ

ಇಮೇಜ್
ಶಿರೂರು/ಕಮತಗಿ: ಶಿರೂರು ಹಾಗೂ ಕಮತಗಿ ಪಟ್ಟಣಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ರಸ್ತೆ, ಕುಡಿಯುವ ನೀರು, ಚರಂಡಿ, ಸ್ವಚ್ಛತೆ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳಿಗೆ ಒಟ್ಟು ₹7.58 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ ಮೇಟಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಶಿರೂರು ಪಟ್ಟಣ ಪಂಚಾಯಿತಿ ವತಿಯಿಂದ ₹3.96 ಕೋಟಿ ಹಾಗೂ ಕಮತಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ₹3.62 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಎರಡೂ ಪಟ್ಟಣಗಳ ಮೂಲಸೌಕರ್ಯ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ಕಂಡುಬರಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಶಿರೂರು ಪಟ್ಟಣದಲ್ಲಿ ನಗರೋತ್ಥಾನ ಯೋಜನೆ ಹಂತ–4, ಎನ್‌ಜಿಟಿ ಪರಿಸರ ಪರಿಹಾರ ನಿಧಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಎಸ್‌ಬಿಎಂ) ಅನುದಾನದಡಿ ₹1.90 ಕೋಟಿ ವೆಚ್ಚದಲ್ಲಿ ಮಲ ಕೆಸರು ಸಂಸ್ಕರಣಾ ಘಟಕ ನಿರ್ಮಾಣ, ವಿಶೇಷಚೇತನ ಫಲಾನುಭವಿಗಳಿಗೆ ₹10.62 ಲಕ್ಷ ವೆಚ್ಚದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನಗಳ ಖರೀದಿ, ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ ₹35 ಲಕ್ಷ ಉಳಿಕೆ ಅನುದಾನದಡಿ ಮೂರು ಕಾಮಗಾರಿಗಳು ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ₹85 ಲಕ್ಷ ಶಾಸಕರ ವಿಶೇಷ ಅನುದಾನದ ಮೂರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಮತಗಿ ಪಟ್ಟಣದಲ್ಲಿ...

ಬಿಪಿಎಲ್‌ ಕಾರ್ಡ್‌ ರದ್ದತಿ ಸದ್ಯಕ್ಕೆ ತಡೆ: ಸಚಿವ ರಿಜ್ವಾನ್ ಅರ್ಷದ್

ಇಮೇಜ್
ಉಡುಪಿ: ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿದ್ದ ಬಿಪಿಎಲ್‌ ಪಡಿತರ ಚೀಟಿಗಳ ರದ್ದತಿ ಪ್ರಕ್ರಿಯೆಯನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ 7.59 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ಬಂದಿತ್ತು. ಅದರಂತೆ ಈಗಾಗಲೇ ಸುಮಾರು 4 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಆದರೆ, ಅರ್ಹ ಫಲಾನುಭವಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವ ಉದ್ದೇಶದಿಂದ ಉಳಿದ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಸುಮಾರು 3.5 ಲಕ್ಷ ಕಾರ್ಡ್‌ಗಳ ಕುರಿತು ಪರಿಶೀಲನೆ ಉಳಿದಿರುವ ಅಂದಾಜು 3.5 ಲಕ್ಷ ಬಿಪಿಎಲ್‌ ಕಾರ್ಡ್‌ಗಳ ರದ್ದತಿ ಸದ್ಯಕ್ಕೆ ಸ್ಥಗಿತಗೊಂಡಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಪಡಿತರ ಚೀಟಿದಾರರಿಗೆ ಮತ್ತೆ ಇ-ಕೆವೈಸಿ ಪಡಿತರ ಚೀಟಿಗಳಿಗೆ ಈ ಹಿಂದೆ ಇ-ಕೆವೈಸಿ ಮಾಡಿಸಿ ಸುಮಾರು ಐದು ವರ್ಷಗಳು ಕಳೆದಿವೆ. ಇದೀಗ ಮತ್ತೆ ಕೆವೈಸಿ ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ...

ಅಧಿವೇಶನದ ಬಳಿಕ ಮಹಿಳಾ ಸಚಿವ ಸ್ಥಾನ ಭರ್ತಿ: ಸತೀಶ ಜಾರಕಿಹೊಳಿ

ಇಮೇಜ್
ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿರುವ ಖಾಲಿ ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ಹೆಸರು ಚರ್ಚೆಯಲ್ಲಿದ್ದು, ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ಗಾಯತ್ರಿ ಶಾಂತೇಗೌಡ ಅವರ ಹೆಸರು ಸಚಿವ ಸ್ಥಾನಕ್ಕೆ ಪರಿಗಣನೆಯಲ್ಲಿದೆ. ಮೂವರೂ ಸಮರ್ಥರಾಗಿದ್ದು, ಪಕ್ಷದ ವರಿಷ್ಠರು ಯಾರನ್ನು ಆಯ್ಕೆ ಮಾಡುತ್ತಾರೋ ಅವರ ಪರವಾಗಿ ಎಲ್ಲರೂ ನಿಲ್ಲುತ್ತೇವೆ ಎಂದರು. ಮಹಿಳಾ ಸಚಿವ ಸ್ಥಾನಕ್ಕೆ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ಕಾರಣ ಆಯ್ಕೆಯ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವುದಾಗಿದೆ. ಸದ್ಯ ಖಾತೆಯನ್ನು ಮುಖ್ಯಮಂತ್ರಿ ನಿರ್ವಹಿಸುತ್ತಿದ್ದು, ಅಧಿವೇಶನದ ಬಳಿಕ ಒಬ್ಬರು ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು. ಜಮೀರ್ ವಿಚಾರ: ರಾಜಕೀಯ ಮಾಡುವುದು ಬೇಡ ಸಚಿವ ಜಮೀರ್ ಅಹಮದ್ ಅವರು ಧ್ವಜಾರೋಹಣ ಕಾರ್ಯಕ್ರಮದಿಂದ ದೂರ ಉಳಿದಿರುವ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಅವರು ಬರೆದಿರುವ ಪತ್ರದಲ್ಲಿ ಬಿಬಿಎಂಪಿ ಚುನಾವಣೆ ಸೇರಿದಂತೆ ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು. ಬಿಜೆಪಿ ಈ ವಿಷಯವನ್ನು ರಾ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಎಚ್.ವೈ. ಮೇಟಿ ಹೆಸರು ನಾಮಕರಣಕ್ಕೆ ಮನವಿ

ಇಮೇಜ್
ಬಾಗಲಕೋಟೆ: ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ದಿವಂಗತ ಶಾಸಕ, ಮಾಜಿ ಸಚಿವ ಎಚ್.ವೈ. ಮೇಟಿಯವರ ಹೆಸರಿಡುವಂತೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಎಸ್. ಹದ್ಲಿ ನೇತೃತ್ವದ ನಿಯೋಗವು ಸಣ್ಣ ಕೈಗಾರಿಕೆ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿತು. ಬಾಗಲಕೋಟೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮಂಜೂರು ಮಾಡಿಸುವ ನಿಟ್ಟಿನಲ್ಲಿ ದಿವಂಗತ ಎಚ್.ವೈ. ಮೇಟಿಯವರು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿದ್ದರು. ಜಿಲ್ಲೆಯ ಗ್ರಾಮೀಣ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಬೇಕು ಮತ್ತು ಜಿಲ್ಲೆಯ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕು ಎಂಬುದು ಅವರ ಪ್ರಮುಖ ಆಶಯವಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ. ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರವಾಗಿ ಚರ್ಚಿಸಿ ಯೋಜನೆಗೆ ವೇಗ ನೀಡಲು ಎಚ್.ವೈ. ಮೇಟಿಯವರು ಶ್ರಮಿಸಿದ್ದರು. ಅವರ ಪ್ರಯತ್ನಗಳನ್ನು ಪರಿಗಣಿಸಿ, ಬಾಗಲಕೋಟೆಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ‘ದಿವಂಗತ ಎಚ್.ವೈ. ಮೇಟಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬಾಗಲಕೋಟೆ’ ಎಂದು ನಾಮಕರಣ ಮಾ...

80ನೇ ಸ್ವಾತಂತ್ರ್ಯೋತ್ಸವ: ವಿವಿಧೆಡೆ ಧ್ವಜಾರೋಹಣ ನೆರವೇರಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಸಕ ಉಮೇಶ್ ಮೇಟಿ ಅವರು ನಗರದ ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಿರೂರ ಅಗಸಿಗೆ ತೆರಳಿದ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ನಂತರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಮೇಟಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಹಾಗೂ ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯದ ಮೌಲ್ಯಗಳಾದ ಸಮಾನತೆ, ಸಾಮಾಜಿಕ ನ್ಯಾಯ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜನರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ಹೇಳಿದರು. ಶಿಕ್ಷಣ, ಆರೋಗ್ಯ, ರೈತರ ಕಲ್ಯಾಣ, ಮಹಿಳಾ ಸಬಲೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಾಡಿನ ಪ್ರಗತಿಗೆ ಕೈಜೋಡಿಸುವ ಸಂಕಲ್ಪ ಮಾಡೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅನಿಲ್ ಕು...