ಪೋಸ್ಟ್‌ಗಳು

ಅಕ್ಟೋಬರ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ನವನಗರದ ಬಸ್ ನಿಲ್ದಾಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮ

ಇಮೇಜ್
ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಡಿಸಿ, ಸಿಇಓ ಚಾಲನೆ ಬಾಗಲಕೋಟೆ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನವನಗರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಜಂಟಿಯಾಗಿ ಉದ್ಘಾಟಿಸಿದರು.             ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಎನ್.ಆರ್.ಎಲ್.ಎಂ ಯೋಜನೆ ಮಹಿಳೆಯರು ಸ್ವಾವಲಂಬನೆಯಾಗಿ ಬದಕಲು ದಾರಿ ದೀಪವಾಗಿದೆ. ತಾವೇ ಉತ್ಪಾದಿಸಿದ ವಸ್ತುಗಳನ್ನು ಮಾರು ಮಳಿಗೆಯನ್ನು ಸಹ ಜಿಲ್ಲಾ ಪಂಚಾಯತಿಯವರು ನಿರ್ಮಿಸಿಕೊಟ್ಟಿದ್ದಾರೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.             ಜಿ.ಪಂ ಸಿಇಓ ಮಾತನಾಡಿ ಈ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಚಟುವಟಿಕೆ ಕೈಗೊಳ್ಳಲು ಜಿ.ಪಿ.ಎಲ್.ಎಫ್ ಮೂಲಕ ಸಮುದಾಯ ಬಂಡವಾಳ ನಿಧಿ, ಸುತ್ತುನಿದಿ, ಬೀಜಧನ ಹಾಗೂ ಬ್ಯಾಂಕ ಮೂಲಕ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು.              ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಮಣ್ಣಿನ ಹಣತೆಗಳು & ಎತ್ತುಗಳ ಮೂರ್ತಿಗಳು, ಅಗರಬತ್ತಿ, ಕರ್ಪೂರ, ಊಟದ ತಟ್ಟೆ, ರೊಟ್ಟಿ, ಮುತ್ತಿನ ದಂಡೆ, ಮುತ್ತ...

ನರೇಗಾ ಕಾಮಗಾರಿಯನ್ನು ಕ್ಯೂ ಆರ್ ಕೋಡ ಸ್ಕ್ಯಾನ್ ಮಾಡುವುದರ ಮುಖಾಂತರ ಪಡೆಯಬಹುದು

ಇಮೇಜ್
ಬಾಗಲಕೋಟ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಪಾರದಶ೯ಕತೆಯನ್ನು ಹೊಂದಿದ್ದು ಅದಕ್ಕೆ ಬಲ ತುಂಬಲು ಕ್ರಿಯಾ ಯೋಜನೆಯ ಪ್ರಕ್ರಿಯೆಯನ್ನು ಆನಲೈನಗೊಳಿಸಲಾಗಿದೆ ಎಂದು ಜಿ.ಪಂ ಸಿಇಒ ಶಶೀದರ ಕುರೇರ್ ಹೇಳಿದರು.             ಜಿ.ಪಂ. ಸಭಾಭವನದಲ್ಲಿ 2025-26 ಸಾಲಿನ ನರೇಗಾ ಯೋಜನೆಯ ಕ್ರಿಯಾ ಯೋಜನೆಯ ತಯಾರಿಕೆ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ನಿರ್ದೇಶನದಂತೆ ನಿಗದಿತ ವೇಳಾಪಟ್ಟಿ ಅನ್ವಯ ಕ್ರಿಯಾ ಯೋಜನೆಗೆ ಸಿದ್ಧಮಾಡಿಕೊಳ್ಳಲಾಗಿದೆ. ಈ ಬಾರಿಯ ಕ್ರಿಯಾ ಯೋಜನೆಯ ಪ್ರಕ್ರಿಯೆ ಸಂಪೂರ್ಣ ಆನಲೈನದಿಂದ ಕೂಡಿರುತ್ತದೆ. ಗ್ರಾಮೀಣ ಜನರು ತಮಗಿಷ್ಟವಾದ ಕಾಮಗಾರಿಯನ್ನು ಕ್ಯೂ ಆರ್ ಕೋಡ ಸ್ಕ್ಯಾನ್ ಮಾಡುವುದರ ಮುಖಾಂತರ ಕಾಮಗಾರಿ ಹೊಂದಲು ಅವಕಾಶವಿದೆ ಎಂದರು.              ಆಫಲೈನ ಮುಖಾಂತರವು ಕಾಮಗಾರಿ ಬೇಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸ್ವೀಕೃತವಾದ ಬೇಡಿಕೆಗಳನ್ನು ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪೂರ್ವ ಅಳತೆಗೈದು ಅನುಮೋದನೆ ನೀಡುತ್ತಾರೆ. ಅಧಿಕಾರಿಗಳು ಕಾಮಗಾರಿ ಬೇಡಿಕೆ ಅಜಿ೯ಗಳನ್ನು ಪರಿಶೀಲಿಸಿ ಆನಲೈನ ಕಾಮಗಾರಿ ಬೇಡಿಕೆಯನ್ನು ಹೊಂದುವ ಬಗೆಗೆ ಕುರಿತು ಮಾಹಿತಿ, ಶಿಕ್ಷಣ, ಸಂವಹನ ಚಟುವಟಿಕೆಗಳ ಮುಖಾಂತರ ಇನ್ನಷ್ಟು ವ್ಯಾಪಕ ಪ್ರಚಾರವನ್ನು ಕೈಗೊಳ್ಳಲು ಬ್ಯಾನರ ಅಳವಡಿಸಲಾಗಿದೆ ಎಂದರ...