ಆಲಮಟ್ಟಿ ಜಲಾಶಯಕ್ಕೆ ನೀರಾವರಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಆಲಮಟ್ಟಿ: ರಾಜ್ಯದ ನೀರಾವರಿ ಸಚಿವ ಎನ್.ಎಸ್. ರಾಮಲಿಂಗ ರೆಡ್ಡಿ ಅವರು ಸೋಮವಾರ ಆಲಮಟ್ಟಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಎಚ್. ಮೇಟಿ ಅವರು ಸಚಿವರನ್ನು ಭೇಟಿ ಮಾಡಿದರು.


ಬಳಿಕ ಸಚಿವರು ಶಾಸಕ ಉಮೇಶ್ ಮೇಟಿ ಅವರೊಂದಿಗೆ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲಾಶಯದಲ್ಲಿನ ನೀರಿನ ಸಂಗ್ರಹ, ನೀರಿನ ಮಟ್ಟ ಹಾಗೂ ನೀರಾವರಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ಲಭ್ಯತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


ಈ ವೇಳೆ ಆಲೂರು ತಾಂಡಾ ನಿವಾಸಿಗಳ ಪರವಾಗಿ ಶಾಸಕ ಉಮೇಶ್ ಎಚ್. ಮೇಟಿ ಅವರು ಸಚಿವರಿಗೆ ಮನವಿ ಸಲ್ಲಿಸಿದರು. ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಹೆಚ್ಚಾದಾಗ ಆಲೂರು ತಾಂಡಾಕ್ಕೆ ನೀರು ನುಗ್ಗಿ ತಾಂಡಾ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ತಾಂಡಾ ನಿವಾಸಿಗಳ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ಪಾಟೀಲ, ನೀರಾವರಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ