ಪೋಸ್ಟ್‌ಗಳು

ಆಗಸ್ಟ್, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ತಮಿನಾಳ ನೆರೆ ಸಂತ್ರಸ್ತರ ನಿವೇಶನ ಹಂಚಿಕೆ: ಲೋಕಾಯುಕ್ತ ದಾಳಿ

ಇಮೇಜ್
ಬಾಗಲಕೋಟೆ: ಬದಾಮಿ ತಾಲೂಕಿನ ಗ್ರಾಮ ಪಂಚಾಯಿತಿ ಕಾತರಿಕಿ ಹದ್ದಿಯ ತಮಿನಾಳ ಗ್ರಾಮದಲ್ಲಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಬಾದಾಮಿ ತಹಶೀಲ್ದಾರ್‌ ಕಚೇರಿಗೆ ದಾಳಿ ನಡೆಸಿ ದಾಖಲೆಗಳ ಶೋಧ ಕಾರ್ಯ ಕೈಗೊಂಡಿದ್ದಾರೆ. 2009ರಲ್ಲಿ ಅತಿವೃಷ್ಟಿ ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ತಮಿನಾಳ ಗ್ರಾಮದ 121 ಕುಟುಂಬಗಳು ನೆರೆ ಹಾವಳಿಗೆ ತುತ್ತಾಗಿದ್ದವು. 2011ರಲ್ಲಿ ಸಂತ್ರಸ್ತರಿಗಾಗಿ ನಿವೇಶನ ಹಂಚಿಕೆ ಮಾಡುವ ವೇಳೆ ಹೆಚ್ಚುವರಿಯಾಗಿ 25 ಮನೆಗಳನ್ನು ನಿರ್ಮಿಸಲಾಗಿದ್ದರೂ, 38 ನೆರೆ ಸಂತ್ರಸ್ತ ಕುಟುಂಬಗಳನ್ನು ಕೈಬಿಟ್ಟು ಸಂತ್ರಸ್ತರಲ್ಲದ 62 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಇದರಿಂದ ಅಂದಾಜು ₹1.05 ಕೋಟಿ ಅವ್ಯವಹಾರ ನಡೆದಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ಬಾದಾಮಿ ತಹಶೀಲ್ದಾರ್‌ ಕಚೇರಿಯಲ್ಲಿ ದಾಖಲೆಗಳ ಶೋಧನೆ ನಡೆಸಲು ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆಯಲಾಗಿದೆ. ಬಳಿಕ ಡಿವೈಎಸ್‌ಪಿ ಹಾಗೂ ಇಬ್ಬರು ಪೊಲೀಸ್‌ ನಿರೀಕ್ಷಕರನ್ನೊಳಗೊಂಡ ಲೋಕಾಯುಕ್ತ ತಂಡ ಕಚೇರಿಗೆ ತೆರಳಿ ಶೋಧ ಕಾರ...

ಉದಯ ಲೋಕ 20/08/26 ದಿನಪತ್ರಿಕೆ

ಇಮೇಜ್
ಪೇಜ್ 2 ಪೇಜ್ 3 ಪೇಜ್ 4

ಶಿರೂರು–ಕಮತಗಿ ಪಟ್ಟಣಗಳ ಅಭಿವೃದ್ಧಿಗೆ ₹7.58 ಕೋಟಿ: ಶಾಸಕ ಉಮೇಶ ಮೇಟಿ

ಇಮೇಜ್
ಶಿರೂರು/ಕಮತಗಿ: ಶಿರೂರು ಹಾಗೂ ಕಮತಗಿ ಪಟ್ಟಣಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ರಸ್ತೆ, ಕುಡಿಯುವ ನೀರು, ಚರಂಡಿ, ಸ್ವಚ್ಛತೆ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳಿಗೆ ಒಟ್ಟು ₹7.58 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ ಮೇಟಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಶಿರೂರು ಪಟ್ಟಣ ಪಂಚಾಯಿತಿ ವತಿಯಿಂದ ₹3.96 ಕೋಟಿ ಹಾಗೂ ಕಮತಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ₹3.62 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಎರಡೂ ಪಟ್ಟಣಗಳ ಮೂಲಸೌಕರ್ಯ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ಕಂಡುಬರಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಶಿರೂರು ಪಟ್ಟಣದಲ್ಲಿ ನಗರೋತ್ಥಾನ ಯೋಜನೆ ಹಂತ–4, ಎನ್‌ಜಿಟಿ ಪರಿಸರ ಪರಿಹಾರ ನಿಧಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಎಸ್‌ಬಿಎಂ) ಅನುದಾನದಡಿ ₹1.90 ಕೋಟಿ ವೆಚ್ಚದಲ್ಲಿ ಮಲ ಕೆಸರು ಸಂಸ್ಕರಣಾ ಘಟಕ ನಿರ್ಮಾಣ, ವಿಶೇಷಚೇತನ ಫಲಾನುಭವಿಗಳಿಗೆ ₹10.62 ಲಕ್ಷ ವೆಚ್ಚದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನಗಳ ಖರೀದಿ, ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ ₹35 ಲಕ್ಷ ಉಳಿಕೆ ಅನುದಾನದಡಿ ಮೂರು ಕಾಮಗಾರಿಗಳು ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ₹85 ಲಕ್ಷ ಶಾಸಕರ ವಿಶೇಷ ಅನುದಾನದ ಮೂರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಮತಗಿ ಪಟ್ಟಣದಲ್ಲಿ...

ಬಿಪಿಎಲ್‌ ಕಾರ್ಡ್‌ ರದ್ದತಿ ಸದ್ಯಕ್ಕೆ ತಡೆ: ಸಚಿವ ರಿಜ್ವಾನ್ ಅರ್ಷದ್

ಇಮೇಜ್
ಉಡುಪಿ: ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿದ್ದ ಬಿಪಿಎಲ್‌ ಪಡಿತರ ಚೀಟಿಗಳ ರದ್ದತಿ ಪ್ರಕ್ರಿಯೆಯನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ 7.59 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ಬಂದಿತ್ತು. ಅದರಂತೆ ಈಗಾಗಲೇ ಸುಮಾರು 4 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಆದರೆ, ಅರ್ಹ ಫಲಾನುಭವಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವ ಉದ್ದೇಶದಿಂದ ಉಳಿದ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಸುಮಾರು 3.5 ಲಕ್ಷ ಕಾರ್ಡ್‌ಗಳ ಕುರಿತು ಪರಿಶೀಲನೆ ಉಳಿದಿರುವ ಅಂದಾಜು 3.5 ಲಕ್ಷ ಬಿಪಿಎಲ್‌ ಕಾರ್ಡ್‌ಗಳ ರದ್ದತಿ ಸದ್ಯಕ್ಕೆ ಸ್ಥಗಿತಗೊಂಡಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಪಡಿತರ ಚೀಟಿದಾರರಿಗೆ ಮತ್ತೆ ಇ-ಕೆವೈಸಿ ಪಡಿತರ ಚೀಟಿಗಳಿಗೆ ಈ ಹಿಂದೆ ಇ-ಕೆವೈಸಿ ಮಾಡಿಸಿ ಸುಮಾರು ಐದು ವರ್ಷಗಳು ಕಳೆದಿವೆ. ಇದೀಗ ಮತ್ತೆ ಕೆವೈಸಿ ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ...

ಅಧಿವೇಶನದ ಬಳಿಕ ಮಹಿಳಾ ಸಚಿವ ಸ್ಥಾನ ಭರ್ತಿ: ಸತೀಶ ಜಾರಕಿಹೊಳಿ

ಇಮೇಜ್
ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿರುವ ಖಾಲಿ ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ಹೆಸರು ಚರ್ಚೆಯಲ್ಲಿದ್ದು, ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ಗಾಯತ್ರಿ ಶಾಂತೇಗೌಡ ಅವರ ಹೆಸರು ಸಚಿವ ಸ್ಥಾನಕ್ಕೆ ಪರಿಗಣನೆಯಲ್ಲಿದೆ. ಮೂವರೂ ಸಮರ್ಥರಾಗಿದ್ದು, ಪಕ್ಷದ ವರಿಷ್ಠರು ಯಾರನ್ನು ಆಯ್ಕೆ ಮಾಡುತ್ತಾರೋ ಅವರ ಪರವಾಗಿ ಎಲ್ಲರೂ ನಿಲ್ಲುತ್ತೇವೆ ಎಂದರು. ಮಹಿಳಾ ಸಚಿವ ಸ್ಥಾನಕ್ಕೆ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ಕಾರಣ ಆಯ್ಕೆಯ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವುದಾಗಿದೆ. ಸದ್ಯ ಖಾತೆಯನ್ನು ಮುಖ್ಯಮಂತ್ರಿ ನಿರ್ವಹಿಸುತ್ತಿದ್ದು, ಅಧಿವೇಶನದ ಬಳಿಕ ಒಬ್ಬರು ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು. ಜಮೀರ್ ವಿಚಾರ: ರಾಜಕೀಯ ಮಾಡುವುದು ಬೇಡ ಸಚಿವ ಜಮೀರ್ ಅಹಮದ್ ಅವರು ಧ್ವಜಾರೋಹಣ ಕಾರ್ಯಕ್ರಮದಿಂದ ದೂರ ಉಳಿದಿರುವ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಅವರು ಬರೆದಿರುವ ಪತ್ರದಲ್ಲಿ ಬಿಬಿಎಂಪಿ ಚುನಾವಣೆ ಸೇರಿದಂತೆ ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು. ಬಿಜೆಪಿ ಈ ವಿಷಯವನ್ನು ರಾ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಎಚ್.ವೈ. ಮೇಟಿ ಹೆಸರು ನಾಮಕರಣಕ್ಕೆ ಮನವಿ

ಇಮೇಜ್
ಬಾಗಲಕೋಟೆ: ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ದಿವಂಗತ ಶಾಸಕ, ಮಾಜಿ ಸಚಿವ ಎಚ್.ವೈ. ಮೇಟಿಯವರ ಹೆಸರಿಡುವಂತೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಎಸ್. ಹದ್ಲಿ ನೇತೃತ್ವದ ನಿಯೋಗವು ಸಣ್ಣ ಕೈಗಾರಿಕೆ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿತು. ಬಾಗಲಕೋಟೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮಂಜೂರು ಮಾಡಿಸುವ ನಿಟ್ಟಿನಲ್ಲಿ ದಿವಂಗತ ಎಚ್.ವೈ. ಮೇಟಿಯವರು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿದ್ದರು. ಜಿಲ್ಲೆಯ ಗ್ರಾಮೀಣ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಬೇಕು ಮತ್ತು ಜಿಲ್ಲೆಯ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕು ಎಂಬುದು ಅವರ ಪ್ರಮುಖ ಆಶಯವಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ. ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರವಾಗಿ ಚರ್ಚಿಸಿ ಯೋಜನೆಗೆ ವೇಗ ನೀಡಲು ಎಚ್.ವೈ. ಮೇಟಿಯವರು ಶ್ರಮಿಸಿದ್ದರು. ಅವರ ಪ್ರಯತ್ನಗಳನ್ನು ಪರಿಗಣಿಸಿ, ಬಾಗಲಕೋಟೆಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ‘ದಿವಂಗತ ಎಚ್.ವೈ. ಮೇಟಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬಾಗಲಕೋಟೆ’ ಎಂದು ನಾಮಕರಣ ಮಾ...

80ನೇ ಸ್ವಾತಂತ್ರ್ಯೋತ್ಸವ: ವಿವಿಧೆಡೆ ಧ್ವಜಾರೋಹಣ ನೆರವೇರಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಸಕ ಉಮೇಶ್ ಮೇಟಿ ಅವರು ನಗರದ ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಿರೂರ ಅಗಸಿಗೆ ತೆರಳಿದ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ನಂತರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಮೇಟಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಹಾಗೂ ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯದ ಮೌಲ್ಯಗಳಾದ ಸಮಾನತೆ, ಸಾಮಾಜಿಕ ನ್ಯಾಯ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜನರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ಹೇಳಿದರು. ಶಿಕ್ಷಣ, ಆರೋಗ್ಯ, ರೈತರ ಕಲ್ಯಾಣ, ಮಹಿಳಾ ಸಬಲೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಾಡಿನ ಪ್ರಗತಿಗೆ ಕೈಜೋಡಿಸುವ ಸಂಕಲ್ಪ ಮಾಡೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅನಿಲ್ ಕು...

80ನೇ ಸ್ವಾತಂತ್ರ್ಯೋತ್ಸವ: ನವನಗರದಲ್ಲಿ ವಿವಿಧ ಕಾರ್ಯಕ್ರಮ

ಇಮೇಜ್
ಬಾಗಲಕೋಟೆ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 8.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದ್ದು, ರಾಷ್ಟ್ರಗೀತೆ, ನಾಡಗೀತೆ, ಪರೇಡ್ ವೀಕ್ಷಣೆ ಹಾಗೂ ಪಥಸಂಚಲನ ನಡೆಯಲಿದೆ. ನಂತರ ಸಚಿವ ವಿಜಯಾನಂದ ಕಾಶಪ್ಪನವರ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮೇಶ ಮೇಟಿ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹಾಗೂ ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ 5.30ಕ್ಕೆ ನವನಗರದ ಕಲಾಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ...

₹2,110 ಕೋಟಿ ಹೂಡಿಕೆ ವಂಚನೆ ಆರೋಪ: ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಇ.ಡಿ. ವಶಕ್ಕೆ

ಇಮೇಜ್
ಬೆಂಗಳೂರು: ಹೂಡಿಕೆದಾರರಿಗೆ ಪ್ರತಿ ತಿಂಗಳು ಶೇ.3ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಸುಮಾರು ₹2,110 ಕೋಟಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ ಸಿದ್ದಪ್ಪ ನೀಲಣ್ಣವರ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಬಂಧಿಸಿದೆ. ಆಗಸ್ಟ್ 13ರಂದು ಬಂಧಿಸಲಾಗಿದ್ದು, ನ್ಯಾಯಾಲಯವು 12 ದಿನಗಳ ಇ.ಡಿ. ಕಸ್ಟಡಿಗೆ ಒಪ್ಪಿಸಿದೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆಧಾರದ ಮೇಲೆ ಇ.ಡಿ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ಆರಂಭಿಸಿತ್ತು. ತನಿಖೆ ಮುಂದುವರಿದಂತೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢದಲ್ಲಿ ಶಿವಂ ಅಸೋಸಿಯೇಟ್ಸ್ ದೊಡ್ಡ ಮಟ್ಟದ ಜಾಲ ಹೊಂದಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಸಂಸ್ಥೆ ಡಿಜಿಟಲ್ ವೇದಿಕೆಗಳು ಹಾಗೂ ಏಜೆಂಟರನ್ನು ಬಳಸಿಕೊಂಡಿತ್ತು ಎನ್ನಲಾಗಿದೆ. ಹೂಡಿಕೆದಾರರನ್ನು ಸಂಸ್ಥೆಯತ್ತ ಸೆಳೆಯುವ ಮಧ್ಯವರ್ತಿಗಳಿಗೆ ಶೇ.0.5ರಷ್ಟು ಕಮಿಷನ್ ನೀಡಲಾಗುತ್ತಿತ್ತು ಎಂದು ಇ.ಡಿ. ತಿಳಿಸಿದೆ. 2019ರಿಂದ ಷೇರು ಮಾರುಕಟ್ಟೆಯಲ್ಲಿ ಉಂಟಾದ ನಷ್ಟವನ್ನು ಮುಚ್ಚಿಡಲು ಹೊಸದಾಗಿ ಹೂಡಿಕೆ ಮಾಡಿದವರ ಹಣವನ್ನು ಹಳೆಯ ಹೂಡಿಕೆದಾರರಿಗೆ ಪಾವತಿಸುವ ಮೂಲಕ ಪೋನ್ಜಿ ಮಾದರಿಯಲ್ಲಿ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪವಿದೆ. ತನಿಖೆಯ ಪ್ರಕಾರ, ಹೂಡ...

ನಿಕೋಟಿನ್ ನಿಷೇಧ ಮುಂದುವರಿಕೆ: ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಇಲ್ಲ ಎಂದ ಖಾದರ್

ಇಮೇಜ್
ಬೆಂಗಳೂರು: ನಿಕೋಟಿನ್ ಹಾಗೂ ತಂಬಾಕು ಹೊಂದಿರುವ ಗುಟ್ಕಾ, ಪಾನ್‌ ಮಸಾಲ ಉತ್ಪನ್ನಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಈ ನಿರ್ಧಾರದಿಂದ ಅಡಿಕೆ ಬೆಳೆಗಾರರು ಆತಂಕಪಡುವ ಅಗತ್ಯವಿಲ್ಲ ಎಂದೂ ಅವರು ತಿಳಿಸಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್‌ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂಬ ನಿಯಮ ಜಾರಿಗೊಳಿಸಲಾಗಿದೆ. ಇದರಿಂದ ಅಡಿಕೆ ಬೆಳೆಗಾರರು, ರೈತರು ಅಥವಾ ಅಡಿಕೆ ವ್ಯಾಪಾರಿಗಳಿಗೆ ಯಾವುದೇ ನೇರ ತೊಂದರೆಯಾಗುವುದಿಲ್ಲ. ಸರ್ಕಾರವು ಅಡಿಕೆ ಕ್ಷೇತ್ರಕ್ಕೆ ಅಗತ್ಯ ಬೆಂಬಲ ಹಾಗೂ ಪ್ರೋತ್ಸಾಹ ನೀಡಲಿದೆ ಎಂದು ಖಾದರ್ ಹೇಳಿದರು. ಅಡಿಕೆ ಬೆಳೆಗಾರರಿಗೆ ತೊಂದರೆ ಉಂಟುಮಾಡುವ ಯಾವುದೇ ಕ್ರಮವನ್ನು ಸರ್ಕಾರ ಕೈಗೊಳ್ಳುವುದಿಲ್ಲ. ನಿಷೇಧದಿಂದ ಅಡಿಕೆ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯೇ ಹೆಚ್ಚು. ಗುಟ್ಕಾ ತಯಾರಿಕೆಗೆ ದೇಶೀಯ ಅಡಿಕೆಗಿಂತ ನೇಪಾಳ ಹಾಗೂ ಬಾಂಗ್ಲಾದೇಶದಿಂದ ಆಮದಾಗುವ ಅಡಿಕೆಯನ್ನು ಬಳಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಹಿಂದೆ ಗುಟ್ಕಾ ನಿಷೇಧ ಜಾರಿಗೊಳಿಸಿದ ಸಂದರ್ಭದಲ್ಲಿಯೂ ಅಡಿಕೆ ಬೆಲೆ ಕುಸಿಯಲಿದೆ ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ನಂತರ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಇದೇ ರೀತಿಯಾಗಿ ಈಗಿನ ನಿರ್ಧಾರದಿಂದಲೂ ಬೆಳೆಗಾರರಿಗೆ ಸಮಸ್ಯೆಯಾಗುವುದಿಲ್ಲ. ಮುಂದಿನ ಮೂರು ತಿಂಗಳ ಬೆಳವಣಿಗೆಯನ್ನು ಗಮನಿಸಿದರೆ ಪರಿಸ್ಥಿತಿ ಸ್ಪಷ್ಟವಾ...

ಉದಯ ಲೋಕ ಕನ್ನಡ ದಿನಪತ್ರಿಕೆ | 14-08-2026

ಇಮೇಜ್
ಪೇಜ್ 02  ಪೇಜ್ 03  ಪೇಜ್ 04

ಮೊದಲ ಬಾರಿಗೆ ವಿಧಾನಸಭಾ ಅಧಿವೇಶನಕ್ಕೆ ಪ್ರವೇಶಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭಾ ಅಧಿವೇಶನಕ್ಕೆ ಆಗಮಿಸಿದ ಉಮೇಶ್ ಮೇಟಿ ಅವರು, ವಿಧಾನಸಭೆಯ ಮೆಟ್ಟಿಲುಗಳ ಬಳಿ ಕೈ ಮುಗಿದು ಬಳಿಕ ಸದನದೊಳಗೆ ಪ್ರವೇಶಿಸಿದರು. ಹೊಸ ಜವಾಬ್ದಾರಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಅವರು, ತಮ್ಮ ಕ್ಷೇತ್ರದ ಜನರ ಆಶಯ ಹಾಗೂ ನಿರೀಕ್ಷೆಗಳನ್ನು ಸದನದಲ್ಲಿ ಸಮರ್ಥವಾಗಿ ಪ್ರತಿನಿಧಿಸುವ ಸಂಕಲ್ಪದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಿದರು.

ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಸರ್ಕಾರಿ ಗೌರವ ನೀಡಲು ಮನವಿ

ಇಮೇಜ್
ಬಾಗಲಕೋಟೆ: ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಕರ್ನಾಟಕದ ರಾಜ್ಯ ಘಟಕದ ಆದೇಶದಂತೆ, ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿ ವರ್ಷ ಜನವರಿ 26ರ ಗಣರಾಜ್ಯೋತ್ಸವ ಹಾಗೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಸರ್ಕಾರಿ, ಅರೆಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರವನ್ನು ಇರಿಸಿ, ಸರ್ಕಾರಿ ಗೌರವ ಸಲ್ಲಿಸಲು ಅಗತ್ಯ ಆದೇಶವನ್ನು ಶೀಘ್ರ ಹೊರಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಕ್ರಾಂತಿಕಾರಿ ಹೋರಾಟಗಾರರಾಗಿದ್ದು, ಅವರ ದೇಶಭಕ್ತಿ, ಸಾಹಸ ಮತ್ತು ತ್ಯಾಗದ ಸಂದೇಶವನ್ನು ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಳ್ಳಬೇಕು ಎಂದು ಸೇನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಬಾಗಲಕೋಟೆ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಸುರೇಶ ಚಿತ್ತವಾಡಗಿ, ಜಿಲ್ಲಾ ಗೌರವಾಧ್ಯಕ್ಷ ಬಸಪ್ಪ ತೆಲಗಿ, ಜಿಲ್ಲಾ ಕಾರ್ಯಾಧ್ಯಕ್ಷ ಶಿವಕುಮಾರ ಪೂಜಾರಿ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ವಿಶ್ಚಲ ಗೌಡರ ಉಪಸ್ಥಿತರಿದ್ದರು.

ಪ್ರತಿಭೆಗೆ ಪ್ರೋತ್ಸಾಹ ಅಗತ್ಯ: ಶಾಸಕ ಉಮೇಶ ಮೇಟಿ

ಇಮೇಜ್
ಬಾಗಲಕೋಟೆ, ಆ.9: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಶಿಕ್ಷಣದ ಜತೆಗೆ ಸಂಸ್ಕಾರ, ಮಾನವೀಯತೆ ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಉಮೇಶ ಮೇಟಿ ಹೇಳಿದರು. ನಗರದ ಶಿವಾನುಭವ ಕಲ್ಯಾಣ ಮಂಟಪ ಚರಂತಿಮಠದಲ್ಲಿ ಬಣಜಿಗ ಸಮಾಜದ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳ ಸಾಧನೆಯ ಹಿಂದೆ ತಂದೆ-ತಾಯಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಸಮಾಜದ ಪ್ರೋತ್ಸಾಹವಿದೆ. ಮಕ್ಕಳನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡದೆ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಬೇಕು. ಇಂದು ದೊರೆತಿರುವ ಪುರಸ್ಕಾರ ಸಾಧನೆಯ ಅಂತ್ಯವಲ್ಲ; ಮುಂದಿನ ದೊಡ್ಡ ಸಾಧನೆಗೆ ಇದು ಮೊದಲ ಹೆಜ್ಜೆಯಾಗಬೇಕು’ ಎಂದರು. ಬಣಜಿಗ ಸಮಾಜವು ಶಿಕ್ಷಣ, ವ್ಯಾಪಾರ, ಉದ್ಯಮ ಹಾಗೂ ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದೆ. ಯುವ ಪೀಳಿಗೆ ಈ ಪರಂಪರೆಯನ್ನು ಮುಂದುವರಿಸಿ ಸಮಾಜದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀ ಸದ್ಗುರು ಡಾ. ಎ.ಸಿ. ವಾಲಿ ಮಹಾರಾಜರು, ವೀರಭದ್ರಪ್ಪ ಅಂಗಡಿ, ಪ್ರಕಾಶ್ ತಪಶೆಟ್ಟಿ, ಬಸವರಾಜ ಕಟಗೇರಿ, ರಾಜು ಕೊಳಲಗಿ,...

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಶಿಕ್ಷಣ ಪಡೆದು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು:ಶಾಸಕ ಉಮೇಶ್ ಮೇಟಿ

ಇಮೇಜ್
ಮಕ್ಕಳ ಭವಿಷ್ಯಕ್ಕೆ ಭದ್ರ ಅಡಿಪಾಯ – ಶಾಸಕ ಉಮೇಶ ಮೇಟಿ ಬಾಗಲಕೋಟೆ, ಆ. 8: ಮಗುವಿನ ಭವಿಷ್ಯ ರೂಪುಗೊಳ್ಳುವುದು ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವುದರಿಂದ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಭದ್ರ ಅಡಿಪಾಯ ಸಿಗಲಿದ್ದು, ಇದು ಸರ್ಕಾರದ ಮಹತ್ವದ ಶಿಕ್ಷಣ ಸುಧಾರಣೆಯ ಹೆಜ್ಜೆಯಾಗಿದೆ ಎಂದು ಶಾಸಕ ಉಮೇಶ ಮೇಟಿ ಹೇಳಿದರು. ತಾಲೂಕಿನ ತಾಳಿಗಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆ ಹಾಡುವುದರ ಮೂಲಕ ಆರಂಭವಾಯಿತು. ಬಳಿಕ ಆಗಮಿಸಿದ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಲು ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ. ಶಿಕ್ಷಕರ ಸಮರ್ಪಿತ ಸೇವೆಯಿಂದ ಮಕ್ಕಳು ಉತ್ತಮ ಪ್ರಜೆಗಳಾ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: 400 ಅರ್ಜಿಗಳಿಗೆ ಅನುಮೋದನೆ

ಇಮೇಜ್
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಅರ್ಜಿಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅನುಮೋದನೆ ನೀಡಿದೆ. ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರಂತರವಾಗಿ ಸಲ್ಲಿಸಿದ್ದ ಮನವಿ ಹಾಗೂ ಹೋರಾಟದ ಫಲವಾಗಿ, ಒಂದೇ ಹಂತದಲ್ಲಿ ಇಷ್ಟೊಂದು ಸಂಖ್ಯೆಯ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಮಂಜೂರಾಗಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಸಂಘ ತಿಳಿಸಿದೆ. ಗ್ರಾಮೀಣ ಪತ್ರಕರ್ತರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಅರ್ಜಿಗಳ ದಾಖಲೆಗಳನ್ನು ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಿದ ವಾರ್ತಾ ಇಲಾಖೆಯ ಕ್ರಮವನ್ನು ಕೆಯುಡಬ್ಲ್ಯೂಜೆ ಸ್ವಾಗತಿಸಿದ್ದು, ಇಲಾಖೆಗೆ ಕೃತಜ್ಞತೆ ಸಲ್ಲಿಸಿದೆ.ಇನ್ನೂ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ಇಲಾಖೆಯ ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಂಘ ಮನವಿ ಮಾಡಿದೆ. ಸಭೆಯ ಸಂದರ್ಭದಲ್ಲಿ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರನ್ನು ಸನ್ಮಾನಿಸಲಾಯಿತು. ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ್ ಕಡಬೂರು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡ...

ಸಿಸಿಎಸ್‌ಆರ್ ನೆರವಿನಿಂದ 60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜಿಲ್ಲಾಡಳಿತ ಯೋಜನೆ

ಇಮೇಜ್
ಬಾಗಲಕೋಟೆ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸಾಮಾಜಿಕ ಹೊಣೆಗಾರಿಕೆ ನಿಧಿ (CSR) ಅಡಿ 60 ಶಾಲೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಉದ್ಯಮಗಳು ಹಾಗೂ ವಿವಿಧ ಸಂಸ್ಥೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪಾಲುದಾರರಾಗಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಶಾಲೆಗಳನ್ನು ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಶಾಲೆಗಳಲ್ಲಿ ಹೆಚ್ಚುವರಿ ತರಗತಿ ಕೊಠಡಿಗಳು, ಸುಸಜ್ಜಿತ ಶೌಚಾಲಯಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ತರಗತಿಗಳು, ಡಿಜಿಟಲ್ ಕಲಿಕಾ ಸೌಲಭ್ಯ, ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಗ್ರಂಥಾಲಯ, ಆಟದ ಮೈದಾನ, ಕಾಂಪೌಂಡ್ ನಿರ್ಮಾಣ ಹಾಗೂ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ. ಕೈಗಾರಿಕೆಗಳು ತಮ್ಮ CSR ಅನುದಾನದಲ್ಲಿ ಒಂದು ಅಥವಾ ಹೆಚ್ಚಿನ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೆ ಕೈಜೋಡಿಸಬಹುದು ಎಂದು ಅವರು ಮನವಿ ಮಾಡಿದರು. ...

ಬರ ಸ್ಥಿತಿ ಕುರಿತು ಸರ್ಕಾರಕ್ಕೆ ಶೀಘ್ರ ವರದಿ: ಸಚಿವ ವಿಜಯಾನಂದ ಕಾಶಪ್ಪನವರ

ಇಮೇಜ್
ಬಾಗಲಕೋಟ : ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ವಾಸ್ತವ ಚಿತ್ರಣವನ್ನು ಪರಿಶೀಲಿಸಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಶೀಘ್ರದಲ್ಲೇ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಬರ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳು ತಾಲ್ಲೂಕುವಾರು ಮಾಹಿತಿ ಸಂಗ್ರಹಿಸಿ ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಇಲಾಖೆಗಳ ನಡುವೆ ಸಮನ್ವಯ ಅತ್ಯಗತ್ಯ ಎಂದರು. ಸಭೆಯಲ್ಲಿ ಜಿಲ್ಲೆಯಲ್ಲಿ ದಾಖಲಾಗಿರುವ ಮಳೆಯ ಪ್ರಮಾಣ, ತಾಲ್ಲೂಕುವಾರು ಮಳೆ ಕೊರತೆ, ಮುಂಗಾರು ಹಂಗಾಮಿನ ಪ್ರಗತಿ, ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ಹಾಗೂ ಕುಡಿಯುವ ನೀರು ಮತ್ತು ನೀರಾವರಿ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಅಗತ್ಯ ಬೀಜ, ರಸಗೊಬ್ಬರ ಹಾಗೂ ತಾಂತ್ರಿಕ ಸಲಹೆಗಳು ಸಮಯಕ್ಕೆ ತಲುಪುವಂತೆ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಲಭ್ಯತೆ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಹಾಗೂ ನೀರಿನ ಮೂಲಗಳ ಸಂರಕ್ಷಣೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು. ನೀರಿನ ...

ಬರ ಅಧ್ಯಯನ ಮುಂದುವರಿಸಿದ ಸಚಿವರು: ಬೆಳೆ ಹಾನಿ ಪರಿಶೀಲನೆ

ಇಮೇಜ್
ಬಾಗಲಕೋಟೆ : ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಗುರುವಾರವೂ ಮುಂದುವರಿಸಿದರು. ಬಾಗಲಕೋಟೆ ತಾಲೂಕಿನ ಚಿಟಗಿನಕೊಪ್ಪ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿ ರೈತರ ಅಹವಾಲು ಆಲಿಸಿದರು. ಚಿಟಗಿನಕೊಪ್ಪ ಗ್ರಾಮದ ರೈತ ಶೇಖರಪ್ಪ ಹಾವರಗಿ ಅವರ ಜಮೀನಿನಲ್ಲಿ ಬೆಳೆದ ತೊಗರಿ ಬೆಳೆ ಹಾಗೂ ರುಕ್ಮೀಬಾಯಿ ನಾಯಕ ಅವರ ಜಮೀನಿನ ಉಳ್ಳಾಗಡ್ಡಿ ಮತ್ತು ಸೂರ್ಯಕಾಂತಿ ಬೆಳೆಗಳನ್ನು ವೀಕ್ಷಿಸಿದ ಸಚಿವರು, ಮಳೆಯ ಅಭಾವದಿಂದ ಉಂಟಾಗಿರುವ ನಷ್ಟದ ಕುರಿತು ರೈತರಿಂದ ಮಾಹಿತಿ ಪಡೆದರು. ನಂತರ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟಿ ಗ್ರಾಮದ ಪತ್ರಪ್ಪ ಹೊಸಕೋಟೆ ಅವರ ಜಮೀನಿನ ಹೆಸರು ಬೆಳೆ ಹಾಗೂ ಮಲ್ಲಾಪೂರ ಗ್ರಾಮದ ರೈತ ಮೌಲಾಸಾಬ ಮುಲ್ಲಾ ಅವರ ಈರುಳ್ಳಿ ಬೆಳೆ ಹಾನಿಯನ್ನೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಮಳೆ ಕೊರತೆಯ ಸಂದರ್ಭಗಳಲ್ಲಿ ರೈತರಿಗೆ ಪರ್ಯಾಯ ಬೆಳೆಗಳ ಆಯ್ಕೆ, ಬಿತ್ತನೆಗೆ ಸೂಕ್ತ ಸಮಯ ಹಾಗೂ ಬೆಳೆ ವಿಮೆ ಯೋಜನೆಗಳ ಕುರಿತು ಗ್ರಾಮ ಮಟ್ಟದಲ್ಲಿಯೇ ಸಮಗ್ರ ಮಾಹಿತಿ ಮತ್ತು ತಾಂತ್ರಿಕ ಮಾರ್ಗದರ್ಶನ ನೀಡುವಂತೆ ಸೂಚಿಸಿದರು. ತಡವಾಗಿ ತೊಗರಿ ಬಿತ್ತನೆ ಮಾಡಿದರೆ ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ, ರೈತರು ಬಿತ್ತನ...

ಬರ ಪರಿಸ್ಥಿತಿ ಪರಿವೀಕ್ಷಣೆ: ಬೆಳೆಹಾನಿ ಸಮಗ್ರ ವರದಿ ಸಲ್ಲಿಸಲು ಸಚಿವ ಕಾಶಪ್ಪನವರ ಸೂಚನೆ

ಇಮೇಜ್
ಬಾಗಲಕೋಟೆ : ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಬುಧವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ವೀಕ್ಷಿಸಿದರು. ಇಳಕಲ್ ತಾಲೂಕಿನ ಹೆರೂರ ಗ್ರಾಮದ ರೈತ ಗಿರಿರಾಜ ದರಕ ಅವರ ತೊಗರಿ ಬೆಳೆ, ರಕ್ಕಸಗಿ ಗ್ರಾಮದ ರೈತ ಹುಲಗಪ್ಪ ತಳವಾರ ಅವರ ಹೆಸರು ಬೆಳೆ, ಗುಳೇದಗುಡ್ಡ ತಾಲೂಕಿನ ಬೂದನಗಡ ಗ್ರಾಮದ ತೊಗರಿ, ಸೂರ್ಯಕಾಂತಿ, ಸಜ್ಜೆ ಹಾಗೂ ಈರುಳ್ಳಿ ಬೆಳೆ, ಬಾಗಲಕೋಟೆ ತಾಲೂಕಿನ ಶಿರೂರ ಗ್ರಾಮದ ರೈತ ಅರುಣಾ ಕಟ್ಟಿಮನಿ ಅವರ ಮೆಣಸಿನಕಾಯಿ ಬೆಳೆಗಳನ್ನು ಪರಿಶೀಲಿಸಿ ರೈತರ ಅಹವಾಲು ಆಲಿಸಿದರು. ಮಳೆಯ ಅಭಾವದಿಂದ ಉಂಟಾಗಿರುವ ಬೆಳೆ ನಷ್ಟದ ಕುರಿತು ರೈತರಿಂದ ಮಾಹಿತಿ ಪಡೆದ ಸಚಿವರು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮಳೆ ಕೊರತೆಯ ಸಂದರ್ಭದಲ್ಲಿ ರೈತರಿಗೆ ಬೆಳೆ ನಿರ್ವಹಣೆ, ಪರ್ಯಾಯ ಬೆಳೆ ಆಯ್ಕೆ ಹಾಗೂ ನಷ್ಟ ತಗ್ಗಿಸುವ ಕುರಿತು ತಾಂತ್ರಿಕ ಮಾರ್ಗದರ್ಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಳೆ ವಿಮೆ ಯೋಜನೆಯಡಿ ನೋಂದಾಯಿತ ರೈತರ ಮಾಹಿತಿ ಪಡೆದು, ಅರ್ಹ ರೈತರಿಗೆ ವಿಮೆ ಸೌಲಭ್ಯ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಹಾಗೂ ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ...